ನೆಲ್ಯಾಡಿ : ತಲೆಮರೆಸಿದ್ದ ಕೊಲೆ ಯತ್ನ ಆರೋಪಿ ಸೆರೆ

Update: 2018-09-07 13:01 GMT

ಬಂಟ್ವಾಳ, ಸೆ. 7: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಶುಕ್ರವಾರ ನೆಲ್ಯಾಡಿ ಬಸ್ ನಿಲ್ದಾಣದ ಬಳಿ ದಸ್ತಗಿರಿ ಮಾಡಿದ್ದಾರೆ. 

ನೆಲ್ಯಾಡಿ ಹೊಸಮಜಲು ನಿವಾಸಿ ಸೈಯದ್ ಜಾಫರ್ ಪಾಷ ಬಂಧಿತ ಆರೋಪಿ. ಪುತ್ತಿಲ ಗ್ರಾಮದ ಮುಸ್ತಾಫ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದು, ಆತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ ಹಾಗೂ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.  

ಠಾಣಾ ಪೊಲೀಸ್ ಉಪನಿರೀಕ್ಷಕ ಸತೀಶ್ ಬಲ್ಲಾಳ್, ಸಿಬಂದಿ ಗಂಗಾಧರ ಬಿ. ಹಾಗೂ ಹರೀಶ್ ಪಿ. ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News