ಬಂಟ್ವಾಳ : ಚೂರಿ ಇರಿತ ಪ್ರಕರಣದ ಆರೋಪಿಯ ಬಂಧನ

Update: 2018-09-07 13:04 GMT

ಬಂಟ್ವಾಳ, ಸೆ.7: ಬೆಂಜನಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ನಿವಾಸಿ ಪ್ರದೀಪ ಯಾನೆ ಮುನ್ನ (19) ಬಂಧಿತ ಆರೋಪಿ.

ಘಟನೆ ಹಿನ್ನೆಲೆ: ಸೆ. 4ರಂದು ಕುಟುಂಬದ ವಿಚಾರವಾಗಿ ಪ್ರದೀಪ ಎಂಬಾತನು ಯೋಗೀಶ ಎಂಬಾತನಿಗೆ ಅವಾಚ್ಯ ಶಬ್ದಗಳಿಂದ ಬೈದು, ತದನಂತರ ಚಾಕುವಿನಿಂದ ಯೋಗೀಶನ ಕಿಬ್ಬೊಟ್ಟೆಗೆ ಇರಿದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಕೈಗೆತ್ತಿಗೊಂಡ ಬಂಟ್ವಾಳ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಮಾರ್ಗದರ್ಶನದಂತೆ ಬಂಟ್ವಾಳ ಎಸ್ಸೈಗಳಾದ ಚಂದ್ರಶೇಖರ್, ಹರೀಶ್ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆರೋಪಿ ಪ್ರದೀಪನನ್ನು ಕಲ್ಪನೆ ಎಂಬಲ್ಲಿ ಬಂಧಿಸಿ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News