ಕೊಡಗು ನೆರೆ ಸಂತ್ರಸ್ತರಿಗೆ ಕೆಎಸ್‌ಡಿಎಲ್ ನೆರವು

Update: 2018-09-07 15:06 GMT

ಬೆಂಗಳೂರು, ಸೆ.7: ಜಲ ಪ್ರವಾಹಕ್ಕೆ ಒಳಗಾದ ಕೊಡಗು ಮತ್ತು ಇತರೆ ಜಿಲ್ಲೆಗಳ ಸಂತ್ರಸ್ತರ ನೆರವಿಗಾಗಿ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತ(ಕೆಎಸ್‌ಡಿಎಲ್) ವತಿಯಿಂದ 1 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮತ್ತು 50 ಲಕ್ಷ ರೂ.ಗಳ ಚೆಕ್ ಅನ್ನು ರಾಜ್ಯ ಸರಕಾರದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿ-2018ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News