ಸೆ.8: ರಾಜ್ಯ ಮಟ್ಟದ ವಿಚಾರ ಸಂಕಿರಣ
Update: 2018-09-07 15:09 GMT
ಬೆಂಗಳೂರು, ಸೆ.7: ದಲಿತ ಸಂಘಟನೆಗಳ ವತಿಯಿಂದ ‘ಸಂವಿಧಾನ ಸುಟ್ಟ ಬೆಂಕಿ ದೇಶವನ್ನು ಸುಡುವುದು’ ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಸೆ.8ರಂದು ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣವನ್ನು ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ, ಸಾಹಿತಿ ಡಾ.ಕೆ.ಷರೀಫಾ, ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಮಾಡಲಿದ್ದು, ದಲಿತ ಸಂಘರ್ಷ ಸಮಿತಿ ಸಂಚಾಲಕ ನಾಗರಾಜ ನಂಜುಂಡಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.