ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಆರೋಪ: ಮೂವರನ್ನು ಥಳಿಸಿ ಕೊಂದ ಗ್ರಾಮಸ್ಥರು

Update: 2018-09-07 15:47 GMT

ಪಾಟ್ನಾ, ಸೆ.7: ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಮೂವರನ್ನು ಗುಂಪೊಂದು ಥಳಿಸಿ ಹತ್ಯೆಗೈದಿರುವ ಘಟನೆ ಬಿಹಾರದ ಬೇಗುಸರಾಯ್ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮೂವರೂ 20 ವರ್ಷದೊಳಗಿನವರಾಗಿದ್ದಾರೆ.

ನಾರಾಯಣಿಪರ್ ನಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಸರಕಾರಿ ಶಾಲೆಯೊಂದಕ್ಕೆ ಇಂದು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಮೂವರು ನುಗ್ಗಿದ್ದು, ವಿದ್ಯಾರ್ಥಿನಿಯನ್ನು ವಿಚಾರಿಸಿದ್ದರು. ವಿದ್ಯಾರ್ಥಿನಿಯನ್ನು ಅಪಹರಿಸಲು ಇವರು ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದ್ದು, ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯರಿಗೆ ಶಾಲೆಯಲ್ಲಿ ಮಕ್ಕಳ ಬೊಬ್ಬೆ ಕೇಳಿಸಿತ್ತು.

ಕೂಡಲೇ ಅವರು ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಬಂದ ಗ್ರಾಮಸ್ಥರು ಮೂವರನ್ನು ಅಟ್ಟಾಡಿಸಿ ಹೊಡೆದಿದ್ದಾರೆ. ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ತೀವ್ರತೆಗೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News