ಕ್ಷಮಾದಾನ ಅರ್ಜಿ ಪರಿಗಣಿಸಿ: ತ.ನಾ. ರಾಜ್ಯಪಾಲರಿಗೆ ಸುಪ್ರೀಂ ಸೂಚನೆ
Update: 2018-09-07 16:28 GMT
ಹೊಸದಿಲ್ಲಿ, ಸೆ. 7: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಲನ್ನ ಕ್ಷಮಾದಾನ ಅರ್ಜಿಯನ್ನು ಪರಿಗಣಿಸುವಂತೆ ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ಪೇರರಿವಾಲ್ನನನ್ನು ಬಿಡುಗಡೆ ಮಾಡುವ ಪ್ರಸ್ತಾಪಕ್ಕೆ ಸಂಬಂಧಿಸಿ ತಮಿಳುನಾಡು ಸರಕಾರ ಸಲ್ಲಿಸಿದ ಪ್ರಸ್ತಾವಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿ ರಂಜನ್ ಗೊಗೋಯ್, ನವೀನ್ ಸಿನ್ಹಾ ಹಾಗೂ ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ವಿಲೇವಾರಿ ಮಾಡಿತು.