ದೇಶದಲ್ಲೇ ಸಂಶೋಧನೆ ನಡೆಸಿ: ಡಾ.ರಾಜೇಂದ್ರ

Update: 2018-09-07 18:20 GMT

ಉಡುಪಿ, ಸೆ.7: ಭಾರತೀಯರು ದೇಶದಲ್ಲಿಯೇ ಸಂಶೋಧನೆ ನಡೆಸಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಸಂಶೋಧನೆಯಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ರಾಜೇಂದ್ರ ಹೇಳಿದ್ದಾರೆ.
ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಸಂಘ ಹಾಗೂ ಜೀವ ವೈವಿಧ್ಯ ವೇದಿಕೆಯಯನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್., ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಂದ್ರಶೇಖರ ಬಿ.ಎಂ. ಉಪಸ್ಥಿತರಿದ್ದರು. ವಿಜ್ಞಾನ ನಿಕಾಯದ ಡೀನ್ ಪ್ರೊ.ರಾಮಚಂದ್ರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೇಶವಮೂರ್ತಿ ಎಂ.ವಿ. ವಂದಿಸಿದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News