ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ಇಬ್ಬರು ಮೃತ್ಯು

Update: 2018-09-08 04:55 GMT

ತುಮಕೂರು, ಸೆ.8: ತುಂಡಾಗಿ ಬಿದ್ದಿದ್ದರೂ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಶಿರಾ ತಾಲೂಕಿನ ಕಾರ್ಪೇಹಳ್ಳಿ ಎಂಬಲ್ಲಿ ನಡೆದಿದೆ.

ಮೃತರನ್ನು ಕಾರ್ಪೇಹಳ್ಳಿ ನಿವಾಸಿಗಳಾದ ಹರೀಶ್(40) ಮತ್ತು ಈರದಾಸಪ್ಪ(50) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ ಈರ ದಾಸಪ್ಪ ಮೂತ್ರ ವಿಸರ್ಜನೆಗೆ ತೆರಳಿದ ಸಂದರ್ಭ ಈ ಅವಘಡ ಸಂಭವಿಸಿದೆ. ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯು ಕಂಬದಿಂದ ತುಂಡಾಗಿ ಮನೆ ಸಮೀಪ ಬಿದ್ದಿತ್ತು. ಇದನ್ನು ಗಮನಿಸದೆ ಮೂತ್ರ ವಿಸರ್ಜನೆಗೆಂದು ಬಂದ ಈರದಾಸಪ್ಪ ಅದನ್ನು ಆಕಸ್ಮಿಕವಾಗಿ ತುಳಿದಿದ್ದಾರೆ. ಈರದಾಸಪ್ಪರ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಹರೀಶ್ ಕೂಡಾ ವಿದ್ಯುತ್ ಆಘಾತಕ್ಕೊಳಗಾದರೆನ್ನಲಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News