ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಆಗ್ರಹಿಸಿ ಮುಸ್ಲಿಂ ಲೀಗ್ನಿಂದ ಸಿಎಂಗೆ ಮನವಿ
Update: 2018-09-08 07:57 GMT
ಮಂಗಳೂರು, ಸೆ.8: ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಅವರ ಹೆಸರಿಡುವಂತೆ ಒತ್ತಾಯಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ದ.ಕ. ಜಿಲ್ಲಾ ಸಮಿತಿ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಮಂಗಳೂರಿಗೆ ಶುಕ್ರವಾರ ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಲೀಗ್ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದೆ.
ರಾಜ್ಯದಲ್ಲಿ ನವೆಂಬರ್ 10ರಂದು ಆಚರಿಸಲ್ಪಡುವ ಟಿಪ್ಪು ಸುಲ್ತಾನ್ ಜಯಂತಿಗೆ ಕೆಲವು ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸುತ್ತಿವೆ. ಇದ್ಯಾವುದಕ್ಕೆ ಜಗ್ಗದೆ ಯಶಸ್ವಿಯಾಗಿ ಟಿಪ್ಪು ಜಯಂತಿ ಆಚರಿಸಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ದ.ಕ. ಜಿಲ್ಲಾ ಸಮಿತಿ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಅದೇರೀತಿ ರಾಜ್ಯದಲ್ಲಿ ಸಾಹಸ ಮೆರೆದವರಿಗೆ ಟಿಪ್ಪು ಸುಲ್ತಾನ್ ನಾಮಾಂಕಿತ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ನಿಯೋಗವು ಮನವಿಯಲ್ಲಿ ಒತ್ತಾಯಿಸಿದೆ.