ಸೆ. 10ರ ಭಾರತ್ ಬಂದ್‌ಗೆ ಬಂದರು ಶ್ರಮಿಕ ಸಂಘದಿಂದ ಶಕ್ತಿ ಪ್ರದರ್ಶನ

Update: 2018-09-08 13:04 GMT

ಮಂಗಳೂರು, ಸೆ. 8: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಸೆ. 10ರ ಭಾರತ್ ಬಂದ್‌ಗೆ ಬಂದರು ಶ್ರಮಿಕರ ಸಂಘ ಬೆಂಬಲ ವ್ಯಕ್ತಪಡಿಸಿ ಶನಿವಾರ ಹಳೆ ಬಂದರು ಪ್ರದೇಶದಲ್ಲಿ ಶಕ್ತಿ ಪ್ರದರ್ಶಿಸಿತು.

ಬಂದರಿನಲ್ಲಿ ವ್ಯವಹಾರ ಚಟುವಟಿಕೆ ಆರಂಭಗೊಳ್ಳುತ್ತಿದ್ದಂತೆಯೇ ಕಾರ್ಮಿಕರ ಕಟ್ಟೆಯ ಬಳಿ ಜಮಾಯಿಸಿದ ಕಾರ್ಮಿಕರು ಮೋದಿ ಸರಕಾರದ ವಿರುದ್ಧ ಆಕ್ರೋಶದ ಘೋಷಣೆಗಳನ್ನು ಕೂಗುತ್ತಾ ಭಾರತ್ ಬಂದ್‌ಗೆ ಬೆಂಬಲ ಯಾಚಿಸುತ್ತಾ ಮೆರವಣಿಗೆ ನಡೆಸಿದರು.

ಈ ಸಂದರ್ಭ ಬಂದರು ಶ್ರಮಿಕರ ಸಂಘದ ಅಧ್ಯಕ್ಷ ಪಿ.ಎಸ್. ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ. ಇಮ್ತಿಯಾಝ್,ಮುಖಂಡರಾದ ಹರೀಶ್ ಕೆರೆಬೈಲ್, ಮುಹಮ್ಮದ್ ಮೋನು,ಚಂದ್ರಹಾಸ್ ಬಬ್ಬುಕಟ್ಟೆ, ಹಸನ್ ಮೋನು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News