ರವಿವಾರ ರಾತ್ರಿ ಹೊಸದಿಲ್ಲಿಗೆ ಸಿಎಂ ಎಚ್‌ಡಿಕೆ

Update: 2018-09-08 14:19 GMT

ಬೆಂಗಳೂರು, ಸೆ.8: ಇತ್ತೀಚೆಗೆ ಭಾರಿ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಅನಾಹುತಕ್ಕೆ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರಕಾರದ ನೆರವು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವಿವಾರ ಸಂಜೆ 6.55ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸೋಮವಾರ ಬೆಳಗ್ಗೆ 11.15ಕ್ಕೆ ಪ್ರಧಾನಿ ನರೇಂದ್ರಮೋದಿಯನ್ನು ಸಂಸತ್ ಭವನದ ಸೌತ್‌ಬ್ಲಾಕ್‌ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಿರುವ ಕುಮಾರಸ್ವಾಮಿ, ಬಳಿಕ ಸಂಬಂಧಪಟ್ಟ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಅಗತ್ಯ ನೆರವು ಒದಗಿಸುವಂತೆ ಕೋರಲಿದ್ದಾರೆ. ಅಲ್ಲದೆ, ಅಂದೇ ರಾತ್ರಿ 8.30ಕ್ಕೆ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News