ಬಂಟ್ವಾಳ: ಕಳವು ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ

Update: 2018-09-08 14:47 GMT

ಬಂಟ್ವಾಳ, ಸೆ. 8: ವಿವಿಧೆಡೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ಪೊಲೀಸರು ಶನಿವಾರ ಬಂಧಿಸಿ, ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೊತ್ತುಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಮೊಡಂಕಾಪು ಸಮೀಪದ ಪಲ್ಲಮಜಲು ನಿವಾಸಿ ಮುಹಮ್ಮದ್ ಇಕ್ಬಾಲ್ ಯಾನೆ ಇಕ್ಕು (48) ಬಂಧಿತ ಆರೋಪಿ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಜೀರ್ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ಕಳವು ಮಾಡಲಾಗಿದ್ದ ಲ್ಯಾಪ್ ಟಾಪ್, 14 ಗ್ರಾಂ ಚಿನ್ನ, 5 ಸಾವಿರದ ರೂ. ಮೌಲ್ಯದ ಮೊಬೈಲ್ ಸೆಟ್, ದ್ವಿಚಕ್ರ ವಾಹನ ಹಾಗೂ ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವ ಬಗ್ಗೆ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸೊತ್ತುಗಳನ್ನು ಪೊಲೀಸರು ವಶಪಡಿಕೊಂಡಿದ್ದಾರೆ.

ಬಂಟ್ವಾಳ ಗ್ರಾಮಾಂತರ  ಠಾಣಾ ವ್ಯಾಪ್ತಿಯ ಕಡೆಗೋಳಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಇಕ್ಬಾಲ್‍ನನ್ನು ಸಂಶಯದ ಮೇಲೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದಾಗ ವಿವಿಧೆಡೆ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News