ಹನೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2018-09-08 14:57 GMT

ಹನೂರು,ಸೆ.8: ಇಲ್ಲಿನ ಸಮೀಪದ ಜಿ.ಕೆ ಹೊಸೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೋರ್ವರು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಗ್ರಾಮದ ಪ್ರಭುಸ್ವಾಮಿ ಎಂಬವರ ಮಗ ಮಹದೇವಸ್ವಾಮಿ (32) ಮೃತ ವ್ಯಕ್ತಿ.

ಘಟನೆ ವಿವರ: ಅವರು ಶುಕ್ರವಾರ ರಾತ್ರಿ 10ರ ವೇಳೆಗೆ ಮನೆ ಸಮೀಪದಲ್ಲಿರುವ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದರು. ಈ ವೇಳೆ ಕುಡಿದ ಅಮಲಿನಲ್ಲಿ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಬಳಿಕ ಶನಿವಾರ ಮುಂಜಾನೆ ಈ ಬಗ್ಗೆ ಪೋಲಿಸರಿಗೆ ಸುದ್ದಿ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೋಲಿಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳ ಮೂಲಕ ಮೇಲಕ್ಕೇರಿಸಿ, ಹನೂರಿನ ಸರ್ಕಾರಿ ಪ್ರಾಥಮಿಕ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಮೃತನ ತಾಯಿ ರುಕ್ಕಮ್ಮ ನೀಡಿದ ದೂರಿನ ಮೇರೆಗೆ ಹನೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News