×
Ad

ಪ್ರಧಾನ ಮಂತ್ರಿಯನ್ನು ಭೇಟಿ ಮಾಡಲಿರುವ ಸಿ.ಎಂ ಕುಮಾರಸ್ವಾಮಿ ನೇತೃತ್ವದ ನಿಯೋಗ

Update: 2018-09-08 22:50 IST

ಬೆಂಗಳೂರು, ಅ.8: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಂಸದರು ಹಾಗೂ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನೊಳಗೊಂಡ ನಿಯೋಗವು ದಿನಾoಕ ಸೆ.10 ರಂದು ಬೆಳಗ್ಗೆ 11.30 ಕ್ಕೆ ನವದೆಹಲಿಯಲ್ಲಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಅತಿವೃಷ್ಟಿಗೆ ಸಂಬಂಧಿಸಿದಂತೆ ಪರಿಹಾರ ಕೋರಿ ಮನವಿ ಸಲ್ಲಿಸಲಿದ್ದಾರೆ. 

ನಿಯೋಗದಲ್ಲಿ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಹೆಚ್.ಡಿ.ದೇವೇಗೌಡ, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳೊಂದಿಗೆ ತೆರಳಿ ಪ್ರಧಾನಿಯವರಿಗೆ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News