ವಿಜ್ಞಾನ ವಿಚಾರಗೋಷ್ಟಿ; ಲಿಖಿತಾ ಮಧುಕರ್ ರಾಜ್ಯಮಟ್ಟಕ್ಕೆ ಆಯ್ಕೆ

Update: 2018-09-09 12:15 GMT

ಭಟ್ಕಳ, ಸೆ. 9: ಡಯಟ್ ಕುಮಟಾದಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಟಿಯಲ್ಲಿ ಕೈಗಾರಿಕಾ ಕ್ರಾಂತಿ ಕುರಿತು ವಿಚಾರ ಮಂಡಿಸಿದ ಇಲ್ಲಿನ ಸರಕಾರಿ ಪ್ರೌಢಶಾಲೆ ತೆರ್ನಮಕ್ಕಿಯ ವಿದ್ಯಾರ್ಥಿನಿ ಲಿಖಿತಾ ಮಧುಕರ ಧೀಕ್ಷಿತ್ ಈಕೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಇವಳ ಸಾಧನೆಗೆ ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News