ಉತ್ತರ ಪ್ರದೇಶದಲ್ಲಿ ದಲಿತ ಯುವಕನ ಥಳಿಸಿ ಹತ್ಯೆ

Update: 2018-09-09 14:19 GMT
ಸಾಂದರ್ಭಿಕ ಚಿತ್ರ

ಮುಝಫ್ಫರ್‌ನಗರ, ಸೆ.9: 20ರ ಹರೆಯದ ದಲಿತ ಯುವಕನನ್ನು ಅಪರಿಚಿತ ದುಷ್ಕರ್ಮಿಗಳ ಗುಂಪು ಥಳಿಸಿ ಹತ್ಯೆ ಮಾಡಿದ ಘಟನೆ ಇಲ್ಲಿನ ಬುಧನ ಪಟ್ಟಣದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವಕನನ್ನು ಕಪಿಲ್ ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ನಾಪತ್ತೆಯಾಗಿದ್ದ. ಮರುದಿನ ಈತನ ಮೃತದೇಹ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ರಾಮ ಕಿಶನ್ ಅವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನ ಹತ್ಯೆಯನ್ನು ಖಂಡಿಸಿ ಆತನ ಕುಟುಂಸ್ಥರು ಶನಿವಾರ ಪ್ರತಿಭಟನೆ ನಡೆಸಿದ್ದು ಕೊಲೆಗಾರರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News