ವಾಮಾಮಾರ್ಗದಿಂದ ಸರ್ಕಾರ ರಚನೆಗೆ ಬಿಜೆಪಿ ಪ್ರಯತ್ನ: ಸಚಿವ ಸಿ. ಪುಟ್ಟರಂಗಶೆಟ್ಟಿ

Update: 2018-09-09 16:01 GMT

ಚಾಮರಾಜನಗರ,ಸೆ.9: ಬಿಜೆಪಿ ನಡೆಸುವ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಹೋದರೆ ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತೆ ಎಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಶಾಸಕರು ಬಲಿಯಾಗಲಾರರು. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವಾಗ ನಡೆಸಿದ ಆಪರೇಷನ್ ಕಮಲದಲ್ಲಿ ಹೋದವರ ಸ್ಥಿತಿ ಹೇಗಿದೆ ? ನಡು ನೀರಿನಲ್ಲಿ ಕೈ ಬಿಟ್ಟಂತಿದೆ. ಇವೆಲ್ಲಾ ಕಣ್ಮುಂದೆ ಇರುವಾಗ ಕಾಂಗ್ರೆಸ್ ಶಾಸಕರು ಆಪರೇಷನ್ ಕಮಲಗೆ ಬಲಿಯಾಗಲಾರರು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ವಾಮ ಮಾರ್ಗದಲ್ಲಿ ಪ್ರಯತ್ನ ಮಾಡುತ್ತಿದ್ದು, ಐಟಿ ಇಡಿ ದುರ್ಬಳಕೆ ಮಾಡಿಕೊಂಡು ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಡಿ.ಕೆ. ಶಿವಕುಮಾರ್ ದೈರ್ಯವಂತರು. ಅವರು ಅದನ್ನು ಎದುರಿಸುತ್ತಾರೆ ಎಂದು ಹೇಳಿದ ಅವರು, ನಾಳಿನ ಭಾರತ್ ಬಂದ್‍ ಚಾಮರಾಜನಗರದಲ್ಲಿ ಯಶಸ್ವಿಯಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News