ಮಂಡ್ಯ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು
ಮಂಡ್ಯ, ಸೆ.9: ಎರಡು ಬೈಕ್ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಕೆನ್ನಾಳು ಗೇಟ್ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದ ಚಲುವೇಗೌಡರ ಪುತ್ರ ಎನ್.ಸಿ.ದೀಪಕ್ (38) ಎಂಬಾತ ಮೃತ ವ್ಯಕ್ತಿ. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎನ್.ಸಿ.ದೀಪಕ್ ಶನಿವಾರ ತಡರಾತ್ರಿ ಪಾಂಡವಪುರಕ್ಕೆ ಹಿರೋಹೋಂಡಾ ಬೈಕ್ನಲ್ಲಿ ಆಗಮಿಸುತ್ತಿದ್ದ ವೇಳೆ ಕೆನ್ನಾಳು ಗೇಟ್ ಬಳಿ ಎದುರಿನಿಂದ ವೇಗವಾಗಿ ಬಂದ ಹೊಂಡಾ ಶೈನ್ ಬೈಕ್ ಗೆ ಮುಖಾಮುಖಿ ಢಿಕ್ಕಿಯಾಗಿ ಈ ಘಟನೆ ನಡೆದಿದೆ.
ದೀಪಕ್ಗೆ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮೈಸೂರಿನ ಖಾಸಗಿ ಆಸ್ಪತ್ರೆ ನಂತರ, ಶ್ರೀರಂಗಪಟ್ಟಣ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.