ಮಂಡ್ಯ: ಭಾರತ್ ಬಂದ್‍ಗೆ ಖಾಸಗಿ ಬಸ್ ಮಾಲಕರ ಬೆಂಬಲ

Update: 2018-09-09 17:29 GMT

ಮಂಡ್ಯ, ಸೆ.9: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಸೆ.10ರ ಭಾರತ್ ಬಂದ್‍ಗೆ ಮಂಡ್ಯ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಸಂಪೂರ್ಣ ಬೆಂಬಲ ನೀಡಿದೆ.

ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಖಾಸಗಿ ಬಸ್‍ಗಳ ಸಂಚರಿಸುವುದಿಲ್ಲ, ಸಾರ್ವಜನಿಕರು ಸಹಕರಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಜಿ.ಪಿ.ಭಕ್ತವತ್ಸಲ ಹಾಗೂ ಉಪಾಧ್ಯಕ್ಷ ಎಸ್.ಎನ್.ಮಂಚೇಗೌಡ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News