ಮೀರಠ್, ದೆಹಲಿಯಲ್ಲಿ ಭೂಕಂಪ

Update: 2018-09-10 04:12 GMT

ಹೊಸದಿಲ್ಲಿ,ಸೆ.10: ಉತ್ತರ ಪ್ರದೇಶದ ಮೀರಠ್ ಜಿಲ್ಲೆ ಖಾರ್ಕೋಡದಲ್ಲಿ ಸೋಮವಾರ ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪ ತೀವ್ರತೆ 3.6ರಷ್ಟಿತ್ತು ಎಂದು ಅಮೆರಿಕದ ಜಿಯೋಗ್ರಾಫಿಕಲ್ ಸರ್ವೆ ಹೇಳಿದೆ.

ಬೆಳಿಗ್ಗೆ 6.28ರ ವೇಳೆಗೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಉತ್ತರ ಪ್ರದೇಶದ ಹಲವೆಡೆಗಳಲ್ಲಿ ಕೂಡಾ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿಪಾಸ್ತಿ ನಷ್ಟದ ವಿವರಗಳು ಬಂದಿಲ್ಲ.

ಹರ್ಯಾಣದ ಝಜ್ಜಾರ್ ಜಿಲ್ಲೆಯಲ್ಲಿ ರವಿವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 3.8ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ 24 ಗಂಟೆಯೊಳಗಾಗಿ ಪಕ್ಕದಲ್ಲೇ ಮತ್ತೆ ಭೂಕಂಪವಾಗಿರುವುದು ಆತಂಕಕಕ್ಕೆ ಕಾರಣವಾಗಿದೆ. ರವಿವಾರ ಸಂಜೆ 4.37ಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News