ಭಾರತ ಬಂದ್: ಬೆಳ್ತಂಗಡಿಯಲ್ಲಿ ವಾಹನ ಸಂಚಾರ ಬಹುತೇಕ ಸ್ಥಗಿತ

Update: 2018-09-10 07:41 GMT

ಬೆಳ್ತಂಗಡಿ, ಸೆ.10: ಬೆಳ್ತಂಗಡಿ ತಾಲೂಕಿನಲ್ಲಿ ಭಾರತ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಾಹನಗಳ ಸಂಚಾರ ಬಹುತೇಕ ಸ್ಥಗಿತಗೊಂಡಿವೆ. ಕೆಲ ಖಾಸಗಿ ವಾಹನಗಳು ಮಾತ್ರ ರಸ್ತೆಯಲ್ಲಿ ಸಂಚರಿಸುತ್ತಿವೆ.

ಪೇಟೆಯಲ್ಲಿ ಜನಸಂಚಾರ ವಿರಳವಾಗಿದ್ದು, ಬಹುತೇಕ ಅಂಗಡಿಗಳು ಮುಚ್ಚಿವೆ. ಪೊಲೀಸರು ಬಿಗು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಈ ನಡುವೆ ಬಂದ್ ಬೆಂಬಲಿಗರು ಅಲ್ಲಲ್ಲಿ ರಸ್ತೆ ಮಧ್ಯೆ ಟಯರ್‌ಗಳನ್ನು ಸುಟ್ಟು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News