ಪ್ರಧಾನಿ ಮೋದಿ ಆಡಳಿತದಲ್ಲಿ ದೇಶಾದ್ಯಂತ ದ್ವೇಷವನ್ನು ಹರಡಲಾಗುತ್ತಿದೆ: ರಾಹುಲ್ ಗಾಂಧಿ

Update: 2018-09-10 14:36 GMT

ಹೊಸದಿಲ್ಲಿ,ಸೆ.10: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಡಿ ದ್ವೇಷವನ್ನು ಹರಡಲಾಗುತ್ತಿದೆ ಮತ್ತು ದೇಶವನ್ನು ಒಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಆರೋಪಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕೀಕೃತ ಪ್ರತಿಪಕ್ಷವು ಬಿಜೆಪಿಯನ್ನು ಪರಾಭವಗೊಳಿಸಲಿದೆ ಎಂದು ಅವರು ಹೇಳಿದರು.

ಇಂಧನ ಬೆಲೆಗಳ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಇಲ್ಲಿಯ ರಾಮಲೀಲಾ ಮೈದಾನದಲ್ಲಿ ಏರ್ಪಡಿಸಿದ್ದ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,ತೈಲ ಬೆಲೆಏರಿಕೆ ಮತ್ತು ರಫೇಲ್ ಒಪ್ಪಂದದ ಕುರಿತು ಮೋದಿಯವರ ಮೌನವನ್ನು ಪ್ರಶ್ನಿಸಿದರು.

ಮೋದಿಯವರನ್ನು ತರಾಟೆಗೆತ್ತಿಕೊಂಡ ಅವರು,ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ಆಗಿರುವುದು 70 ವರ್ಷಗಳ ಆಡಳಿತದಲ್ಲಿ ಆಗಿರಲಿಲ್ಲ ಎಂದು ಪ್ರಧಾನಿಯವರು ಆಗಾಗ್ಗೆ ಹೇಳುತ್ತಿರುವುದು ವಾಸ್ತವದಲ್ಲಿ ನಿಜವೇ ಆಗಿದೆ. ಎಲ್ಲೆಡೆ ದ್ವೇಷವನ್ನು ಹರಡಲಾಗುತ್ತಿದೆ. ಭಾರತೀಯರು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ದೇಶವನ್ನು ಒಡೆಯಲಾಗುತ್ತಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News