ಬಂದ್ ಯಶಸ್ವಿ: ಜಿಲ್ಲಾ ಕಾಂಗ್ರೆಸ್ ಕೃತಜ್ಞತೆ
Update: 2018-09-10 14:44 GMT
ಉಡುಪಿ, ಸೆ.10: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿರುವ ಜಿಲ್ಲೆಯ ಜನತೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸ್ವಯಂಪ್ರೇರಿತ ಬಂದನ್ನು ವಿಫಲಗೊಳಿಸಲು ಯತ್ನಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಬಿಜೆಪಿ ಕ್ರಮ ಖಂಡನೀಯ. ತಪ್ಪಿ ತಸ್ಥರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.