ಬಿಜೆಪಿ ಗೂಂಡಾಗಿರಿ: ಉಡುಪಿ ಮಹಿಳಾ ಕಾಂಗ್ರೆಸ್ ಖಂಡನೆ
Update: 2018-09-10 14:45 GMT
ಉಡುಪಿ, ಸೆ.10: ಕಾಂಗ್ರೆಸ್ ಕಾರ್ಯಕರ್ತರು ಬಂದ್ ಆಚರಿಸಲು ಜನರಲ್ಲಿ ಮನವಿ ಮಾಡಿಕೊಳ್ಳುತ್ತಿರುವಾಗ ಬಿಜೆಪಿ ಕಾರ್ಯಕರ್ತರು ಹಿಂಬಾ ಲಿಸಿಕೊಂಡು ಬಂದು ಗೂಂಡಾಗಿರಿ ಪ್ರದರ್ಶಿಸುವುದು ಸರ್ವಾಧಿಕಾರಿ ಪ್ರವೃತ್ತಿ ಯನ್ನು ಬಿಂಬಿಸುತ್ತದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರಸ್ ಟೀಕಿಸಿದೆ.
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಉದ್ಧೇಶ ಪೂರ್ವಕವಾಗಿ ಹಲ್ಲೆ ಮಾಡಿದ ಬಿಜೆಪಿಯ ಕೃತ್ಯ ಖಂಡನೀಯ ಎಂದು ಕೆಪಿಸಿಸಿ ಕಾರ್ಯದರ್ಶಿ ವೆರೋನಿಕ ಕರ್ನೇಲಿಯೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಡಾ.ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.