ಭಕ್ತೆಯ ಅತ್ಯಾಚಾರ ಆರೋಪ: ನಿತ್ಯಾನಂದನನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್ ಸೂಚನೆ

Update: 2018-09-10 16:14 GMT

ಬೆಂಗಳೂರು, ಸೆ.10: ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.

ರಾಮನಗರದ 3ನೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಜಾಮೀನುರಹಿತ ಬಂಧನ ವಾರೆಂಟ್ ರದ್ದು ಕೋರಿ ನಿತ್ಯಾನಂದ ಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ನಿತ್ಯಾನಂದ ಸ್ವಾಮಿಯನ್ನು ಬಂಧಿಸದಂತೆ ಸರಕಾರಿ ಅಭಿಯೋಜಕ ರಾಚಯ್ಯ ಅವರಿಗೆ ಸೂಚನೆ ನೀಡಿ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News