ಕಾಂಗ್ರೆಸ್ ಋಣ ತೀರಿಸಲು ಬಂದ್‍ಗೆ ಬೆಂಬಲ ನೀಡಿದ ಕುಮಾರಸ್ವಾಮಿ: ಸಂಸದ ಪ್ರತಾಪ್ ಸಿಂಹ

Update: 2018-09-10 17:20 GMT

ಮೈಸೂರು,ಸೆ.10: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾರನ್ನು ಪುಣ್ಯಾತ್ಮ ಅಂದಿದ್ದರೋ, ಆ ಪುಣ್ಯಾತ್ಮ ರಾಹುಲ್ ಗಾಂಧಿ ಅವರ ಋಣ ತೀರಿಸುವ ಸಲುವಾಗಿ ಬಂದ್‍ಗೆ ಬೆಂಬಲ ಕೊಟ್ಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ  ಅರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ 37 ಸೀಟು ಗೆದ್ದ ಜೆಡಿಎಸ್‍ನ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಕಾರಣ. ಆದ್ದರಿಂದ ಕುಮಾರಸ್ವಾಮಿ ಅವರು ಕಾಂಗ್ರೆಸ್ ಋಣ ತೀರಿಸಲು ಬಂದ್‍ಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.

ಇಂದು ನಡೆದ 'ಭಾರತ್ ಬಂದ್' ಸರ್ಕಾರಿ ಪ್ರಾಯೋಜಿತವಾಗಿದ್ದು, ಕಾಂಗ್ರೆಸ್ ಜೆಡಿಎಸ್ ರಾಜ್ಯ ಸಮ್ಮಿಶ್ರ ಸರ್ಕಾರ ಸರಕಾರಿ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದೆ ಎಂದು ಹರಿಹಾಯ್ದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ಎಚ್.ವಿ.ರಾಜೀವ್, ಪ್ರಭಾಕರರಾವ್ ಶಿಂಧೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News