ಮುಡಿಪು: ಎಸ್ಸೆಸ್ಸೆಫ್ ನಿಂದ ರಕ್ತದಾನ ಶಿಬಿರ

Update: 2018-09-11 08:02 GMT

ಮುಡಿಪು, ಸೆ.11: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ಮುಡಿಪು ಸೆಕ್ಟರ್ ಹಾಗೂ ಎಸ್ಸೆಸ್ಸೆಫ್ ಬಾಳೆಪುಣಿ ಸೆಕ್ಟರ್ ಸಂಯುಕ್ತ ಆಶ್ರಯದಲ್ಲಿ  ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರವು ಮುಡಿಪುವಿನ ಎಜ್ಯು ಪಾರ್ಕ್ ನಲ್ಲಿ ಜರುಗಿತು.

ಎಜ್ಯು ಪಾರ್ಕ್ ಮ್ಯಾನೇಜರ್ ಸಯ್ಯದ್ ಜಲಾಲುದ್ದೀನ್  ತಂಙಳ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಉಪಾಧ್ಯಕ್ಷ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ, ರಾಜ್ಯ ಸದಸ್ಯ ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು, ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ ಮುನ್ನುಡಿ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಶರೀಫ್ ಮುಡಿಪು, ಮುಡಿಪು ಸೆಕ್ಟರ್ ಅಧ್ಯಕ್ಷ ಹುಸೈನ್ ಸಖಾಫಿ, ಬಾಳೆಪುಣಿ ಸೆಕ್ಟರ್ ಅಧ್ಯಕ್ಷ ಅಝೀಝ್ ಎಚ್.ಕಲ್, ಯೆನೆಪೊಯ ಆಸ್ಪತ್ರೆಯ ಡಾ.ಶರೀಫ್, ಇಕ್ಬಾಲ್ ಮಧ್ಯನಡ್ಕ, ಸಿದ್ದೀಕ್ ಸಖಾಫಿ ಕಾಯಾರ್, ಶರೀಫ್ ಸಅದಿ ಸಂಬಾರತೋಟ, ಹಕೀಂ ಪುಮಣ್ಣ್  ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News