ಚಾಮರಾಜನಗರ: ತೆಂಗಿನ ಮರದಿಂದ ಬಿದ್ದು ರೈತ ಮೃತ್ಯು

Update: 2018-09-11 11:34 GMT

ಚಾಮರಾಜನಗರ,ಸೆ.11: ತೆಂಗಿನ ಮರಹತ್ತಿ ಎಳನೀರು ಕೀಳುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.

ಅಮಚವಾಡಿ ಗ್ರಾಮದ ಮಹದೇವಶೆಟ್ಟಿ ಎಂಬ ರೈತ ತೋಟದಲ್ಲಿರುವ ತೆಂಗಿನ ಮರ ಏರಿ ಎಳನೀರು ಕೀಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ತೀವ್ರ ಗಾಯಗೊಂಡ ಅವರನ್ನು ಕೂಡಲೇ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾರೆ.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News