ಮಂಗಳೂರು: ಭಾರತ್ ಬಂದ್ ವೇಳೆ ಹೊಟೇಲ್‌ಗೆ ಕಲ್ಲು ತೂರಾಟ; ಆರೋಪಿ ಸೆರೆ

Update: 2018-09-11 14:55 GMT

ಮಂಗಳೂರು, ಸೆ.11: ಸೋಮವಾರ ನಡೆದ ಭಾರತ್ ಬಂದ್ ವೇಳೆ ನಗರದ ಶಿವಭಾಗ್ ಹೊಟೇಲ್‌ಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗೆ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಮರ್ ಸೋನ್ಸ್ (28) ಬಂಧಿತ ಆರೋಪಿ. ಇನ್ನೋರ್ವ ಆರೋಪಿಯ ಚಹರೆ ಪತ್ತೆಯಾಗಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ. ಬಂಧಿತ ಆರೋಪಿ ಯುವ ಕಾಂಗ್ರೆಸ್ ಕಾರ್ಯಕರ್ತನೆಂದು ತಿಳಿದುಬಂದಿದೆ.

ಘಟನೆ ವಿವರ: ಸೋಮವಾರ ಬೆಳಗ್ಗೆ ನಂತೂರು ಕಡೆಯಿಂದ ಬೆಂದೂರ್‌ವೆಲ್ ಕಡೆಗೆ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದು, ಅವರಲ್ಲಿ ಓರ್ವ ಹೊಟೇಲ್ ಮುಂಭಾಗ ಬಂದು ಹೊಟೇಲಿಗೆ ಕಲ್ಲು ತೂರಾಟ ಮಾಡಿದ್ದಾನೆ. ಇದರಿಂದ ಹೊಟೇಲ್ ಸಿಬ್ಬಂದಿ ಜಯಂತ್ ಕಾಮತ್ (45)ರಿಗೆ ಗಾಯವಾಗಿತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News