ಪುತ್ತೂರು : ಉಪನ್ಯಾಸಕನಿಂದ ವಿದ್ಯಾರ್ಥಿಗೆ ಹಲ್ಲೆ

Update: 2018-09-11 16:55 GMT

ಪುತ್ತೂರು, ಸೆ. 11: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಉಪನ್ಯಾಸಕನೋರ್ವ ವಿದ್ಯಾರ್ಥಿಯ ಕೆನ್ನೆ ಮತ್ತು ತಲೆಗೆ ಕೈಯಿಂದ ಹಲ್ಲೆ ಮಾಡಿದ ಘಟನೆ ಪುತ್ತೂರಿನ ಕಾಲೇಜೊಂದರಲ್ಲಿ ಮಂಗಳವಾರ ನಡೆದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದ ಡಿಪ್ಲೋಮ ವಿದ್ಯಾರ್ಥಿ, ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಕೊಡಾಜೆ ನಿವಾಸಿ ಮುಹಮ್ಮದ್ ಶರೀಫ್ ಎಂಬವರ ಪುತ್ರ ಮಹಮ್ಮದ್ ಮನ್ಸೂರ್ (18) ಹಲ್ಲೆಗೊಳಗಾದ ವಿದ್ಯಾರ್ಥಿ.

ಪ್ರಥಮ ಇಂಟರ್ನಲ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ ಪ್ರಶ್ನೆಗಳಿಗೆ 2 ಸಲ ಉತ್ತರ ಬರೆದುಕೊಂಡು ಬರುವಂತೆ ಉಪನ್ಯಾಸಕ ಶಿವಪ್ರಸಾದ್  ವಾರದ ಹಿಂದೆ ವಿದ್ಯಾರ್ಥಿಗಳಿಗೆ ತಿಳಿಸಿದ್ದರು. ಮಂಗಳವಾರ ಮೊದಲ ತರಗತಿ ಅವಧಿಯಲ್ಲಿ ಉಪನ್ಯಾಸಕ ಶಿವಪ್ರಸಾದ್ ತರಗತಿಗೆ ಬಂದು ಈ ಹೋಂ ವರ್ಕ್ ಬಗ್ಗೆ  ವಿದ್ಯಾರ್ಥಿಗಳಲ್ಲಿ ವಿಚಾರಿಸಿದ್ದು, ತಾನು ಹೋಂ ವರ್ಕ್ ಮಾಡಿರಲಿಲ್ಲ. ಈ ಕಾರಣಕ್ಕಾಗಿ ಅವರು ನನ್ನ ಕೆನ್ನೆ ಮತ್ತು ತಲೆಯ ಭಾಗಕ್ಕೆ  ಹಲ್ಲೆ ಮಾಡಿದ್ದಾರೆ. ತರಗತಿ ಅವಧಿಯ ಬಳಿಕ ತಲೆಸುತ್ತಿದಂತಾಗಿ ತರಗತಿ ಹೊರಗಡೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ಬಂದಿದ್ದ ತನ್ನನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಬ್ಬರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ ಎಂದು ಮಹಮ್ಮದ್ ಮನ್ಸೂರ್ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News