ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಕ್ರಮ: ಸಿಎಂ ಕುಮಾರಸ್ವಾಮಿ

Update: 2018-09-11 17:36 GMT

ಮೈಸೂರು,ಸೆ.11: ರಾಜ್ಯದಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಯನ್ನು ಬಗೆಹರಿಸಲು ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೈಸೂರು ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ಮೈಸೂರು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಈಗಿರುವ ಮರಳು ನೀತಿಯಿಂದ ಸಾರ್ವಜನಿಕರು ಮನೆಗಳನ್ನು ಕಟ್ಟಲು ಅನಾನುಕೂಲ ಉಂಟಾಗಿದ್ದು, ನಾನು ಹೋದ ಕಡೆಯಲ್ಲೆಲ್ಲಾ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಹಾಗಾಗಿ ಸಾಮಾನ್ಯ ಜನರಿಗೂ ಸುಲಭ ರೀತಿಯಲ್ಲಿ ಮರಳು ದೊರೆಯುವಂತೆ ಅವಕಾಶ ಕಲ್ಪಿಸಲು ಬೆಂಗಳೂರಿನಲ್ಲಿ ಸಭೆ ನಡೆಸಿ ಹೊಸ ಮರಳು ನೀತಿ ಜಾರಿಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ವಸತಿ ಇಲ್ಲದವರಿಗೆ ವಸತಿ ಕಲ್ಪಿಸಲು ಸಾರ್ವಜನಿಕ ಸ್ಥಳಗಳನ್ನು ಗುರುತಿಸಿ ಮನೆಗಳನ್ನು ಕಟ್ಟಿಕೊಡುವಂತೆ ಸೂಚಿಸಿದ್ದೇನೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳು ಇಲ್ಲದಿದ್ದರೆ ಖಾಸಗಿಯವರ ಬಳಿ ಖರೀದಿ ಮಾಡಿ ಮನೆಗಳನ್ನು ನಿರ್ಮಿಸುವಂತೆ ಪಾಲಿಕೆ ಮತ್ತು ಮುಡಾ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News