ಶಿವಮೊಗ್ಗ: 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Update: 2018-09-11 18:05 GMT

ಶಿವಮೊಗ್ಗ, ಸೆ. 11: 7 ನೇ ತರಗತಿ ವಿದ್ಯಾರ್ಥಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಒಂದಗದ್ದೆ ಗ್ರಾಮದಲ್ಲಿ ನಡೆದಿದೆ. 

ಆಲುವಳ್ಳಿ ಗ್ರಾಮದ ನಿವಾಸಿ ಈಶ್ವರಪ್ಪ ಎಂಬುವರ ಪುತ್ರ ತಾರಕೇಶ್ವರ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ರಾಮಕೃಷ್ಣ ವಿದ್ಯಾಲಯದಲ್ಲಿ ಅಭ್ಯಾಸ ನಡೆಸುತ್ತಿದ್ದ. 

ಬಾಲಕ ತಾರಕೇಶ್ವರ ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News