ದೇಶದ ಇತಿಹಾಸದಲ್ಲೇ ಯುದ್ಧ ವಿಮಾನ ಖರೀದಿಯಲ್ಲಿ ರಫೇಲ್ ಅತ್ಯಂತ ದೊಡ್ಡ ಭ್ರಷ್ಟಾಚಾರ: ಈಶ್ವರ್ ಖಂಡ್ರೆ

Update: 2018-09-12 09:25 GMT

ಚಿತ್ರದುರ್ಗ, ಸೆ. 12: ದೇಶದ ಇತಿಹಾಸದಲ್ಲೇ ಯುದ್ಧ ವಿಮಾನ ಖರೀದಿಯಲ್ಲಿ ರಫೇಲ್ ಅತ್ಯಂತ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. 

ಕೇಂದ್ರ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ‌ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು ಈ ಹೇಳಿಕೆಯನ್ನು ನೀಡಿದರು.

ನಂತರ ಮಾತನಾಡಿದ ಅವರು ಮೋದಿ ನೇತೃತ್ವದ ಸರ್ಕಾರ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ, ದೇಶದಲ್ಲಿ ಅರಾಜಕತೆ, ಅಸಹಿಷ್ಣುತೆಯ ಭಯದ ವಾತಾವರಣ ಸೃಷ್ಟಿಯಾಗಿದೆ. ರೈತರು, ಶೋಷಿತರು, ಬಡವರು ಭಯದಿಂದ ಬದುಕುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ರೈತರ, ಸಾಮಾನ್ಯ, ಮಧ್ಯಮ ವರ್ಗದ ಜನರ ಜೀವನ ದುಸ್ತರವಾಗಿದೆ ಎಂದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ನೂರಕ್ಕೆ ನೂರರಷ್ಟು ಸ್ಥಿರವಾಗಿದೆ. ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ, ಜಾರಕಿ ಹೋಳಿ ಬ್ರದರ್ಸ್ ಅನುಭವಿಗಳು, ಬುದ್ದಿವಂತರು, ಅವರು ಕಾಂಗ್ರೆಸ್ ನ ನಿಷ್ಠಾವಂತ ಸದಸ್ಯರು. ಯಾವುದೇ ಕಾರಣಕ್ಕೂ ಅವರು ಪಕ್ಷ ಬಿಡುವುದಿಲ್ಲ, ಪಕ್ಷವನ್ನು ಇಬ್ಭಾಗ ಮಾಡಲು ಅವರು ಮುಂದಾಗುವುದಿಲ್ಲ, ಕಾಂಗ್ರೆಸ್ ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ, ಬಿಜೆಪಿ ಶಾಸಕರೇ ಅಧಿಕಾರ ಬೇಕಾದರೆ ಕಾಂಗ್ರೆಸ್ ಗೆ ಬರುತ್ತಾರೆ, ಸರ್ಕಾರ ಬೀಳುತ್ತದೆ ಎನ್ನುವುದು ಬಿಜೆಪಿಯವರ ಕಪೋಲ ಕಲ್ಪಿತ ಆರೋಪವಾಗಿದೆ. ಖಾಲಿ ಇರುವ ಆರು ಸಚಿವ ಸ್ಥಾನವನ್ನ ಸಾಮಾಜಿಕ ನ್ಯಾಯದಡಿ ಎಲ್ಲಾ ವರ್ಗದವರಿಗೆ ನೀಡಲಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News