ಸೆ.15ಕ್ಕೆ ಬೆಳಗಾವಿಯಲ್ಲಿ ಸಿಎಂ ಜನತಾ ದರ್ಶನ

Update: 2018-09-12 14:06 GMT

ಬೆಂಗಳೂರು, ಸೆ. 12: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆ.15ರ ಶನಿವಾರ ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ 3 ರಿಂದ 5ಗಂಟೆಯ ವರೆಗೆ ಜನತಾದರ್ಶನ ನಡೆಸಲಿದ್ದಾರೆ.

ಸೆ.15ರ ಬೆಳಗ್ಗೆ ಬೆಳಗಾವಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಮಧ್ಯಾಹ್ನ 3ಗಂಟೆಯಿಂದ 5ಗಂಟೆ ವರೆಗೆ ಸಾರ್ವಜನಿಕರಿಂದ ಕುಂದುಕೊರತೆ-ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News