ಸರಕಾರ ರಚಿಸುವ ಹಗಲುಗನಸು ಕಾಣುತ್ತಿರುವ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ

Update: 2018-09-12 14:22 GMT

ಬೆಂಗಳೂರು, ಸೆ.12: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್‌ಸಮ್ಮಿಶ್ರ ಸರಕಾರವು ಸುಭದ್ರವಾಗಿದೆ. ಆದರೂ, ಬಿಜೆಪಿಯವರು ಸರಕಾರ ರಚಿಸುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಜೊತೆ ನಾನು ಮಾತನಾಡುತ್ತೇನೆ. ಯಾವ ಸಮಸ್ಯೆಯೂ ನನಗೆ ಕಂಡು ಬರುತ್ತಿಲ್ಲ. ಯಾವ ವಿಚಾರದಲ್ಲಿ ಗೊಂದಲಗಳು ಇವೆ ಅನ್ನೋದು ಸರಿಯಾಗಿ ತಿಳಿಯುತ್ತಿಲ್ಲ ಎಂದರು.

ಕೆಲವು ಮಾಧ್ಯಮಗಳಲ್ಲಿ ಈ ಬೆಳವಣಿಗೆಗಳನ್ನು ಅತ್ಯಂತ ವೈಭವೀಕರಿಸಿ ತೋರಿಸಲಾಗುತ್ತಿದೆ. ರಾಜ್ಯ ಸರಕಾರ ಸುಭದ್ರವಾಗಿದ್ದು, ಯಾವುದೇ ಆತಂಕವಿಲ್ಲ. ಸರಿಯಾದ ದಿಕ್ಕಿನಲ್ಲಿ ಸರಕಾರ ನಡೆಯುತ್ತಿದೆ. ಐದು ವರ್ಷ ಯಶಸ್ವಿಯಾಗಿ ಆಡಳಿತ ನಡೆಸಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News