ಮೈಸೂರು: ಮಾನಸಿಕ ಅಸ್ವಸ್ಥ ಬಾಲಕ ಆತ್ಮಹತ್ಯೆ

Update: 2018-09-12 15:12 GMT

ಮೈಸೂರು,ಸೆ.12: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಬಾಲಕನೋರ್ವ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾದ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

ಹೆಬ್ಬಾಳು ನಿವಾಸಿ ಸುರೇಶ್(15) ನೇಣಿಗೆ ಶರಣಾದವನಾಗಿದ್ದಾನೆ. ಈತ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಶಾಲೆಗೆ ಹೋಗುತ್ತಿರಲಿಲ್ಲ. ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ ವಾಸವಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬದಿಗಿದ್ದ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಮನೆಗೆ ಮರಳಿದಾಗ ವಿಷಯ ತಿಳಿದು ಬಂದಿದ್ದು, ಹೆಬ್ಬಾಳ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News