ಸಾಲಬಾಧೆ: ಕೆರೆಗೆ ಹಾರಿ ರೈತ ಆತ್ಮಹತ್ಯೆ

Update: 2018-09-12 17:34 GMT

ಮಂಡ್ಯ, ಸೆ.12: ಸಾಲಬಾಧೆ ತಾಳಲಾರದೆ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ  ಕೌಡ್ಲೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಜರುಗಿದೆ.

ವೆಂಕಟಪ್ಪ ಅವರ ಪುತ್ರ ವೆಂಕಟರಾಮು(40) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ.

1.5 ಎಕರೆ ಜಮೀನಿನಲ್ಲಿ ಭತ್ತ, ಕಬ್ಬು, ಇತರೆ ಬೆಳೆ ಬೆಳೆಯುತ್ತಿದ್ದ ವೆಂಕಟರಾಮು ಬೆಳೆನಷ್ಟ ಹೊಂದಿದ್ದು, ಕೃಷಿಗಾಗಿ ವಿವಿಧ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ ಸಮಾರು 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.

ಪುತ್ರ ಗಿರೀಶ್ ನೀಡಿದ ದೂರಿನ ಮೇರೆಗೆ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News