ಗೂಂಡಾ ಕಾಯ್ದೆ: ರೌಡಿ ಮತ್ತಿಮಂಜ‌ ಸೆರೆ

Update: 2018-09-13 07:25 GMT

ಬೆಂಗಳೂರು, ಸೆ.13: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರೌಡಿ ಶೀಟರ್ ನನ್ನು ಇಲ್ಲಿನ‌ ಕೆಪಿ‌ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಯಾನೆ ಮತ್ತಿಮಂಜ ಬಂಧಿತ ರೌಡಿ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಸೇರಿದಂತೆ ಒಟ್ಟು 22 ಪ್ರಕರಣಗಳಲ್ಲಿ ಬಂಧಿತ ಆರೋಪಿ ಮಂಜುನಾಥ್ ಭಾಗಿಯಾಗಿದ್ದ ಎನ್ನಲಾಗಿದ್ದು, ಗುರುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News