ಬೆಂಗಳೂರು: ಗಣೇಶನಿಗಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

Update: 2018-09-13 11:30 GMT

ಬೆಂಗಳೂರು, ಸೆ.13: ಗಣೇಶನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿಸೆ.

ಗಣೇಶ ಕೂರಿಸುವ ಜಾಗದ ವಿಚಾರವಾಗಿ ಎರಡು ಗುಂಪುಗಳು ಸೋಲದೇವನಹಳ್ಳಿ ರಸ್ತೆ ಬದಿ ಸೇರಿದ್ದರು. ಈ ವೇಳೆ ಎರಡು ಗುಂಪುಗಳ ನಡುವಿನ ಮಾತುಕತೆ ವಿಕೋಪಕ್ಕೆ ತಿರುಗಿ ಜಗಳ ಶುರುವಾಗಿದೆ ಎನ್ನಲಾಗಿದೆ. 

ಕಳೆದ ವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಗುಂಪುಗಳ ನಡುವಿನ ಗಲಾಟೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News