ಮಂಗಳೂರು: ಪಿಯು ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಮೊಂಬತ್ತಿ ಪ್ರತಿಭಟನೆ

Update: 2018-09-13 15:32 GMT

ಮಂಗಳೂರು, ಸೆ.13: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪಿಯುಸಿ ವಿದ್ಯಾರ್ಥಿನಿ ವಿನೂತ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಪಿಯು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಗುರುವಾರ ನಗರದ ಪುರಭವನದ ಬಳಿ ಮೊಂಬತ್ತಿ ಪ್ರತಿಭಟನೆ ನಡೆಯಿತು.

ಬುಧವಾರ ಬೆಳಗ್ಗೆ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿನೂತ ಆತ್ಮಹತ್ಯೆ ಮಾಡಿದ್ದಾರೆ. ಈ ವಿಚಾರವು ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ಆಘಾತವಾಗಿದೆ. ಇಲ್ಲಿ ನಿರಂತರವಾಗಿ ಇಂತಹ ಘಟನೆಗಳು ನಡೆಯುತ್ತಿದ್ದರೂ ಕೂಡಾ ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕಳೆದ ಹಲವು ವರ್ಷಗಳಿಂದ ಇಲ್ಲಿ ನಡೆಯುವ ಈ ವಿದ್ಯಮಾನದಿಂದ ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯ ಕೂಡಾ ಭಯದ ವಾತಾವರಣದಲ್ಲಿ ಕಾಲ ಕಳೆಯುವಂತಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ದಿನಕರ ಶೆಟ್ಟಿ, ದಲಿತ ಸಂಘಟನೆಯ ಮುಖಂಡ ರಘುವೀರ್ ಸೂಟರ್ ಪೇಟೆ ಹಾಗು ಇತರರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News