ಬಂಗಾರಪೇಟೆ: ದಂಪತಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ
Update: 2018-09-14 05:29 GMT
ಬಂಗಾರಪೇಟೆ, ಸೆ. 14: ದುಷ್ಕರ್ಮಿಗಳ ತಂಡವೊಂದು ಬೈಕ್ ಅಡ್ಡಗಟ್ಟಿ ದಂಪತಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಲಿಬೆಲೆ ಬಳಿ ತಡರಾತ್ರಿ ನಡೆದಿದೆ.
ತೊರಗನದೊಡ್ಡಿ ಗ್ರಾಮದ ವೆಂಕಟೇಶಪ್ಪ ಹಾಗೂ ಲಕ್ಷ್ಮಿದೇವಮ್ಮ ಎಂಬವರು ಮದುವೆ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದೆ ಎಂದು ದೂರಲಾಗಿದೆ.
ಸುಮಾರು ಮೂರು ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಬಂಗಾರಪೇಟೆ ಪೊಲೀಸ್ ರಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.