ಚಾಮರಾಜನಗರ: ರಸ್ತೆ ಅಪಘಾತಕ್ಕೆ ಇಬ್ಬರು ಯುವಕರು ಬಲಿ

Update: 2018-09-14 12:21 GMT

ಚಾಮರಾಜನಗರ,ಸೆ.14: ಸಕ್ಕರೆ ಕಾರ್ಖಾನೆಗೆ ತೆರಳುತ್ತಿದ್ದ ಕಬ್ಬು ತುಂಬಿದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗಡಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಸಕ್ಕರೆ ಕಾರ್ಖಾನೆ ವೃತ್ತದ ಬಳಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದ ಸಮೀಪ ಇರುವ ಮಹದೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿದ ಲಾರಿ ಸಾಗುತ್ತಿದ್ದಾಗ ಕುಂತೂರು ಗ್ರಾಮದ ಕ್ರಾಸ್‍ನಲ್ಲಿ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಿಂದ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಶಿವಕುಮಾರ್ (22) ಸ್ಥಳದಲ್ಲೇ ಸಾವನ್ನಪ್ಪಿದರೆ, ಹರೀಶ್ (25) ಚಿಕಿತ್ಸೆ ಫಲಕಾರಿಯಾಗದೇ ಕೊಳ್ಳೇಗಾಲದಲ್ಲಿ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.

ಕಾರ್ತಿಕ್ ಎಂಬಾತನಿಗೆ ತೀವ್ರ ಗಾಯಗಳಾಗದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News