ಗೂಂಡಾ ಕಾಯ್ದೆ: ರೌಡಿ ಮತ್ತಿ ಮಂಜ ಸೆರೆ

Update: 2018-09-14 15:40 GMT

ಬೆಂಗಳೂರು, ಸೆ.14: ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಮಂಜುನಾಥ ಯಾನೆ ಮತ್ತಿ ಮಂಜ ಎಂಬಾತನನ್ನು ನಗರದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಮಾಗಡಿ ರಸ್ತೆಯ ಚೋಳರ ಪಾಳ್ಯದ ನಿವಾಸಿಯಾಗಿರುವ ಆರೋಪಿ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ 22 ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರದ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ 7, ಕೆ.ಪಿ.ಅಗ್ರಹಾರ ಠಾಣೆಯಲ್ಲಿ 2 ಪ್ರಕರಣ ಸೇರಿ ಒಟ್ಟು 22 ಪ್ರಕರಣಗಳು ದಾಖಲಾಗಿದ್ದು, ಈತ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವನ್ನುಂಟು ಮಾಡುವಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದಲ್ಲಿಡಲು ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ಮಾರ್ಗದರ್ಶನದಲ್ಲಿ ವಿಜಯನಗರ ಉಪ ವಿಭಾಗದ ಎಸಿಪಿ ಪರಮೇಶ್ವರ ಹೆಗಡೆ, ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಮಂಜು, ಆರೋಪಿ ವಿರುದ್ಧ ವರದಿ ತಯಾರಿಸಿ ಆಯುಕ್ತರಿಗೆ ಸಲ್ಲಿಸಿದ್ದರು.

ಆಯುಕ್ತರು ವರದಿ ಆಧಾರದ ಮೇಲೆ ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದಲ್ಲಿಡಲು ಆದೇಶಿಸಿದ್ದರ ಮೇರೆಗೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಪಶ್ಚಿಮ ವಿಭಾಗದಲ್ಲಿ ಕಳೆದ ಎರಡು ವಾರಗಳಲ್ಲಿ ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಅನ್ನು ಬಂಧಿಲಾದ ಮೂರನೆ ಪ್ರಕರಣ ಇದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News