ಮೂಡ್ಲಕಟ್ಟೆ: ಇಂಜಿನಿಯರ್ಸ್‌ ದಿನಾಚರಣೆ

Update: 2018-09-15 12:50 GMT

ಕುಂದಾಪುರ, ಸೆ.15: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಇಂದು ಕಾಲೇಜಿನಲ್ಲಿ ಇಂಜಿನಿ ಯರ್ಸ್‌ ದಿನವನ್ನು ಆಚರಿಸಲಾಯಿತು.

ಕಾಲೇಜು ಆವರಣದಲ್ಲಿರುವ ವಿಶ್ವೇಶ್ವರಯ್ಯನವರ ಪುತ್ಹಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ.ಜಿ. ಎಸ್.ಕಾಟಯ್ಯ ಶುಭಹಾರೈಸಿದರು. ಅಕಾಡೆಮಿಕ್ ನಿರ್ದೇಶಕ ಡಾ.ಚಂದ್ರ ರಾವ್ ಮದನೆ ವಿಶ್ವೇಶ್ವರಯ್ಯನವರ ಸಾಧನೆಗಳನ್ನು ಸ್ಮರಿಸಿದರು.

ಸಿವಿಲ್ ವಿಭಾಗದ ಮುಖ್ಯಸ್ಥೆ ಪ್ರೊ.ಶಶಿಕಲಾ ಅಂಸಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News