ಸೆ.17ರಂದು ‘ಕರವೇ ನಡಿಗೆ ಆಳ್ವಾಸ್ ಕಡೆಗೆ’
Update: 2018-09-15 12:59 GMT
ಉಡುಪಿ, ಸೆ.15: ಮೂಡಬಿದ್ರೆ ಆಳ್ವಾಸ್ ವಿದ್ಯಾ ಸಂಸ್ಥೆಯ ಹೆಣ್ಣು ಮಕ್ಕಳ ಆತ್ಮಹತ್ಯೆ ಪ್ರಕರಣಗಳನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕರವೇ ನಡಿಗೆ ಆಳ್ವಾಸ್ ಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸೆ.17ರಂದು ಮಧ್ಯಾಹ್ನ 3ಗಂಟೆಗೆ ಉಡುಪಿ ಬೋರ್ಡ್ ಹೈಸ್ಕೂಲ್ ಆವರಣದಿಂದ ಹೊರಡುವ ಈ ನಡಿಗೆ ರಾ.ಹೆ. 66ರ ಮೂಲಕ ಕಾಪು, ಪಡುಬಿದ್ರೆ, ಮುಲ್ಕಿ, ಕಿನ್ನಿಗೋಳಿ, ಮೂಡಬಿದ್ರೆ ಪೇಟೆಯ ಮೂಲಕ ಆಳ್ವಾಸ್ ಸಂಸ್ಥೆಯ ಎದುರು ಕೊನೆಗೊಳ್ಳಲಿದೆ. ಈ ಮಧ್ಯೆ ಸಂಜೆಯ ಬಳಿಕ ಕ್ಯಾಂಡಲ್ ಮೆರವಣಿಗೆ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.