30 ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-09-15 14:16 GMT

ಬೆಂಗಳೂರು, ಸೆ.15: ರಾಜ್ಯ ಸರಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 30 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ಕೆಆರ್‌ಐಡಿಎಲ್ ಮುಖ್ಯ ಆಡಳಿತಾಧಿಕಾರಿ-ಎ.ಎಂ.ಯೋಗೀಶ್, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ-ಸುರೇಶ್ ಬಿ ಇಟ್ನಾಳ್, ಬೆಂಗಳೂರಿನ ಕಾನೂನು ಮಾಪನಶಾಸ್ತ್ರ ಇಲಾಖೆಯ ನಿಯಂತ್ರಕ-ಡಾ.ಕೆ.ಎನ್.ಅನುರಾಧಾ, ಬೆಂಗಳೂರಿನ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ-ಎ.ಬಿ.ಬಸವರಾಜು.

ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಉಪ ಕಾರ್ಯದರ್ಶಿ(ಆಡಳಿತ)-ಆರತಿ ಆನಂದ್, ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ(1)-ಎಂ.ಕೆ.ಜಗದೀಶ್, ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ(ಕಾರ್ಯಕ್ರಮ ಎಲ್ ಹುಲ್ಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ-ಡಾ.ಎಸ್.ನಾಗರಾಜು.

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಅಪರ ನಿರ್ದೇಶಕ-ಚಿದಾನಂದ ಸದಾಶಿವನ ವಟಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ-ಎನ್.ಚಂದ್ರಶೇಖರ್, ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ-ಕೆ.ಚನ್ನಬಸಪ್ಪ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ-ವೈ.ಬಿ.ಶಾಂತರಾಜು, ಬೆಂಗಳೂರಿನ ಕರ್ನಾಟಕ ಡ್ರಗ್ಸ್ ಮತ್ತು ಲಾಜಿಸ್ಟಿಕ್ ವೇರ್ ಹೌಸಿಂಗ್ ಸೊಸೈಟಿಯ ಅಪರ ನಿರ್ದೇಶಕ-ಸಿ.ನಾಗರಾಜು, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿ-ಕೆ.ಎಚ್.ಶಿವಕುಮಾರ್, ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ-ಟಿ.ಜವರೇಗೌಡ.

ವಿಜಯಪುರ ಜಿಲ್ಲೆಯ ವಿಜಯಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿ-ರವೀಂದ್ರ ಕರಲಿಂಗಣ್ಣವರ್, ಬೆಂಗಳೂರಿನ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ-ಜಿ.ಆರ್.ಹರಿಶಿಲ್ಪ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ(ಆಡಳಿತ)-ಎನ್.ಸಿ.ಉಷಾರಾಣಿ.

ಹಾವೇರಿ ಜಿಲ್ಲೆಯ ಹಾವೇರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ-ಎನ್.ತಿಪ್ಪೇಸ್ವಾಮಿ, ದಾವಣಗೆರೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ-ಜಿ.ನಜ್ಮಾ, ದೊಡ್ಡಬಳ್ಳಾಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿ-ಸಿ.ಮಂಜುನಾಥ್, ಬೆಂಗಳೂರಿನ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯದರ್ಶಿ-ಖಾಝಿ ನಫೀಸಾ, ಧಾರವಾಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ-ವಿನಾಯಕ ಎ.ಪಾಲನಕರ.

ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ-ಬಿ.ಎನ್.ವೀಣಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಭೂ ಸ್ವಾಧೀನಾಧಿಕಾರಿ-ಎಚ್.ಭಾಗ್ಯಲಕ್ಷ್ಮಿ, ಬೆಳಗಾವಿ ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ-ಬಿ.ಎ.ಜಗದೀಶ್, ರಾಮನಗರ ಜಿಲ್ಲೆಯ ವಿಶೇಷ ಭೂ ಸ್ವಾಧೀನಾಧಿಕಾರಿ-ಪಿ.ಜಯಮಾಧವ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭೂ ನ್ಯಾಯಮಂಡಳಿಯ ವಿಶೇಷ ಸಹಾಯಕ ಆಯುಕ್ತ-ಎಂ.ರವಿಕುಮಾರ್, ತುಮಕೂರು ಜಿಲ್ಲೆಯ ಮಧುಗಿರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ-ಎಚ್.ಜಿ.ಚಂದ್ರಶೇಖರಯ್ಯ ಹಾಗೂ ಬೀದರ್ ಜಿಲ್ಲೆಯ ಕಾರಂಜ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಯನ್ನಾಗಿ ಡಾ.ಕೆ.ದಾಕ್ಷಾಯಿಣಿಯನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News