ಮಂಗಳೂರು ನಗರ ಡಿಸಿಪಿ ಹನುಮಂತರಾಯ ಯಾದಗಿರಿ ಎಸ್ಪಿಯಾಗಿ ವರ್ಗಾವಣೆ

Update: 2018-09-15 14:46 GMT

ಬೆಂಗಳೂರು, ಸೆ.15: ರಾಜ್ಯ ಸರಕಾರವು ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಸುಮಾರು 20 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಈ ಪೈಕಿ ಮಂಗಳೂರು ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯರನ್ನು ಇದಾ ಮಾರ್ಟಿನ್ ಮರ್ಬಾನಿಯಂಗ್‌ರ ವರ್ಗಾವಣೆಯಿಂದ ತೆರವಾದ ಯಾದಗಿರಿ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News