ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ: ಸೆ.18ರಂದು ಮಾಹಿತಿ ಕಾರ್ಯಾಗಾರ

Update: 2018-09-15 15:00 GMT

ಉಡುಪಿ, ಸೆ.15: ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯಡಿ ಯೋಜನೆ ಗಳನ್ನು ಅನುಷ್ಟಾನಗೊಳಿಸುತ್ತಿರುವ ವಿವಿಧ ಇಲಾಖೆಗಳ ಜಿಲ್ಲಾಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಸೆ.18 ರಂದು ಅಪರಾಹ್ನ 3:30ಕ್ಕೆ ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣ ದಲ್ಲಿ ಆಯೋಜಿಸಲಾಗಿದೆ.

ಇದರಲ್ಲಿ ಉಡುಪಿ ಮಾನವ ಹಕ್ಕು ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ ಶಾನ್‌ಬಾಗ್ ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಾಗಾರದಲ್ಲಿ ಈ ಕಾಯ್ದೆಯಡಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೂಕ್ತ ಪೋಷಣೆ, ಸಂರಕ್ಷಣೆ ಮತ್ತು ರಕ್ಷಣೆಯನ್ನು ಒದಗಿಸುವಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುಷ್ಠಾನಾಧಿ ಕಾರಿಗಳು ಹಾಜರಾಗುವಂತೆ ಉಡುಪಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News