ಹಲ್ಲೆ ಪ್ರಕರಣ: ಬಿಜೆಪಿ ಶಾಸಕನ ವಿರುದ್ಧ ಆರೋಪಪಟ್ಟಿ ವಿಚಾರಣೆಗೆ ಪರಿಗಣನೆ

Update: 2018-09-15 15:51 GMT

ಹೊಸದಿಲ್ಲಿ, ಸೆ.15: 2016ರ ಫೆಬ್ರವರಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಸಿಪಿಐ ಮುಖಂಡ ಅಮೀಖ್ ಜಮಾಯಿ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಒ.ಪಿ.ಶರ್ಮ ವಿರುದ್ಧ ದಾಖಲಾಗಿರುವ ಆರೋಪಪಟ್ಟಿಯನ್ನು ದಿಲ್ಲಿ ನ್ಯಾಯಾಲಯ ಶನಿವಾರ ವಿಚಾರಣೆಗೆ ಪರಿಗಣಿಸಿದ್ದು ಸೆ.26ರಂದು ದಾಖಲೆಗಳ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್‌ರನ್ನು 2016ರಲ್ಲಿ ಪಟಿಯಾಲದ ನ್ಯಾಯಾಲಯಕ್ಕೆ ವಿಚಾರಣೆಗೆಂದು ಕರೆದುಕೊಂಡು ಬಂದಿದ್ದ ಸಂದರ್ಭ ಘರ್ಷಣೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಸಲ್ಲಿಸಲಾಗಿರುವ ಆರೋಪಪಟ್ಟಿಯಲ್ಲಿ ಶರ್ಮ ಹಾಗೂ ಆತನ ಗುರುತು ಪತ್ತೆಯಾಗದ ಬೆಂಬಲಿಗರು ಅಮೀಖ್ ಜಮಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದಾಗಿ ಉಲ್ಲೇಖಿಸಲಾಗಿದೆ. ಶರ್ಮ ವಿರುದ್ಧ ಐಪಿಸಿಯ 323 ಮತ್ತು 341 ಸೆಕ್ಷನಗಳಡಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News