ಕೊಳ್ಳೇಗಾಲ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

Update: 2018-09-15 18:00 GMT

ಕೊಳ್ಳೇಗಾಲ,ಸೆ.15: ಹೊಟ್ಟೆ ನೋವು ತಾಳಲಾರದೆ 2 ದಿನಗಳ ಹಿಂದೆ ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜರುಗಿದೆ.

ತಾಲೂಕಿನ ಸರಗೂರು ಗ್ರಾಮದ ನಂಜುಂಡ ಎಂಬುವವರ ಮಗನಾದ ಲೋಕೇಶ್(25) ಎಂಬಾತ ಸಾವನ್ನಪ್ಪಿದ್ದ ಯುವಕ. ಕಳೆದ ಎರಡು ದಿನಗಳ ಹಿಂದೆ ನೋವು ತಾಳಲಾರದೆ ತಾಲೂಕಿನ ಸರಗೂರಿನಲ್ಲಿ ಜಮೀನಿಗೆ ಹಾಕುವ ಫೀಲ್ಡನ್ ಕಾಲನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಲೋಕೇಶ್‍ನ್ನು ಸ್ಥಳೀಯರು ಕರೆತಂದು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಯಲ್ಲಿ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆ ಸಮಯದಲ್ಲಿ ಜಯದೇವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News